ಕಥೆ
ಶುಕ್ರವಾರ, ಜನವರಿ 24, 2014
ಕಥೆ:ಆತ್ಮದ ಸ್ವಗತ
ಕಥೆ
ಕವಿತೆ:ಸಂಕ್ರಾಂತಿ
ಹೊಸ ಹುರುಪು ತಂತು
ಸಂಕ್ರಾಂತಿ ಬಂತು
ಸಂತೋಷ ತಂತು
ನೇಸರನು ಪಥವ ಬದಲಿಸುತ್ತಿರಲು
ಮಾವು ಹೂ ಬಿಟ್ಟು ಸ್ವಾಗತಿಸುತ್ತಿದೆ
ತನುಮನದಲ್ಲಿ ಹೊಸ ಚೈತನ್ಯ ಮೂಡುತ್ತಿದೆ
ಹೊಸ ಬೆಳೆ ಹೊಸ ಕಾಂತಿ
ಜಗದಲಿ ಹರಡುತಿದೆ
-ಅರೆಯೂರು ಚಿ.ಸುರೇಶ್
ದಿನಾಂಕ:15/01/2014ರಂದು ರೇಡಿಯೋ ಸಿದ್ದಾರ್ಥ (90.8 FM0 ದಲ್ಲಿ ಪ್ರಸಾರವಾದ ಕವಿತೆ.
ಕಥೆ:ಸವಿಸವಿ ನೆನಪು
ಭಾನುವಾರ, ಡಿಸೆಂಬರ್ 1, 2013
ಪ್ರಾಚೀನ ಪುಣ್ಯ ಕ್ಷೇತ್ರ ಅರೆಯೂರು ಶ್ರೀ ವೈದ್ಯನಾಥೇಶ್ವರ ಸ್ವಾಮಿ ದೇವಸ್ಥಾನ
ಜ್ಯೋತಿರ್ಲಿಂಗುವಿರುವ ವೈದ್ಯನಾಥೇಶ್ವರ ಸ್ವಾಮಿಯ ಬೀಡು ಅರೆಯೂರು. ಜ್ಯೋತಿರ್ಲಿಂಗದ ದರ್ಶನ ಮಾತ್ರದಿಂದ ಸಕಲ ಪಾಪ: ದುರಿತಗಳು ದೂರವಾಗಿ ಸಕಲಾಭಿಷ್ಠ ನೆರವೇರಿ ಸಾಕ್ಷಾತ್ ಶಿವನ ದರ್ಶನ ಮಾಡಿದ ಪುಣ್ಯ: ಶ್ರೇಯಸ್ಸು ಪ್ರಾಪ್ತಿ ಆಗುವುದೆಂದು ವೇದಗಳಲ್ಲೆ ಇದೆ. |
ಬುಧವಾರ, ಅಕ್ಟೋಬರ್ 16, 2013
ಶನಿವಾರ, ಆಗಸ್ಟ್ 24, 2013
ಅರೆಯೂರು ಚಿ.ಸುರೇಶ್ ರವರ ಪರಿಚಯ
ಸಂಪಾದಕರಾದ ಅರೆಯೂರು ಚಿ.ಸುರೇಶ್ ರವರು ತುಮಕೂರು ಜಿಲ್ಲೆ ಹೆಬ್ಬೂರು ಹೋಬಳಿಯ ಅರೆಯೂರು ಗ್ರಾಮದ ಶ್ರೀಮತಿ ಜಯಮ್ಮ, ಶ್ರೀ. ಚಿಕ್ಕಮಾದಯ್ಯನವರ ದ್ವಿತೀಯ ಪುತ್ರನಾಗಿ 1983 ರ ಆಗಸ್ಟ್ 30 ನೇ ತಾರೀಖು ಜನಿಸಿದರು ಇವರ ಮೊದಲ ಹೆಸರು ಲೋಕೇಶ್ ನಂತರ ಮನೆಯವರು ಪ್ರೀತಿಯಿಂದ ಸೂರಿ ಎಂದು ಕರೆದು, ಶಾಲೆಯಲ್ಲಿ ಎ.ಸಿ ಸುರೇಶ್ ಎಂದು ಹೇಳಿದರು, ಅರೆಯೂರು ಚಿಕ್ಕಮಾದಯ್ಯ ಸುರೇಶ್ ಅಲಿಯಾಸ್ರೆಯೂರು ಚಿ.ಸುರೇಶ್ ರವರು ಪ್ರಾಥಮಿಕ ಶಿಕ್ಷಣವನ್ನು ಪಡೆದರು. ಅರೆಯೂರು ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಮತ್ತು ಅರೆಯೂರು ಗ್ರಾಮದ ಶ್ರೀ ಸಿದ್ಧಗಂಗಾ ಗ್ರಾಮಾಂತರಶಾಲೆಯಲ್ಲಿ ಪರೀಕ್ಷೆಶಿಕ್ಷಣವನ್ನು ಮುಗಿಸಿ ಹಾಲನೂರು ಗ್ರಾಮದ ಶ್ರೀ ಸಿದ್ಧಗಂಗಾ ಜೂನಿಯರ್ ಕಾಲೇಜಿನಲ್ಲಿ ಪಿಯುಸಿ ಮುಗಿಸಿ ತುಮಕೂರು ನಗರದ ಶಿರಾಗೇಟ್ನಲ್ಲಿರುವ ಕ್ರಿಶ್ಚಿಯನ್ ಯೂನಿಯನ್ ಶಾಲೆಯಲ್ಲಿ ಬಿ.ಎ. ಪದವಿ ಮುಗಿಸಿ, ವಿದ್ಯೋದಯ ಕಾನೂನು ಕಾಲೇಜಿಗೆ ಎರಡು ವರ್ಷಗಳ ಕಾಲ ಕಾನೂನು ಅಭ್ಯಾಸ ಮಾಡಿ, ತಮ್ಮ ಓದನ್ನು ಅರ್ಧದಲ್ಲೇ ಮೊಟಕುಗೊಳಿಸಿ, ತುಮಕೂರಿನ ಅಮರ ಸಂದೇಶ ಸಂಜೆ ಪತ್ರಿಕೆ, ತುಮಕೂರು ವಾರ್ತೆ, ನಗೆಮುಗುಳು, ಪತ್ರಿಕೆಗಳಲ್ಲಿ ವರದಿಗಾರರಾಗಿ, ಅಂಕಣಕಾರರಾಗಿ, ಕಥೆ, ಕವಿತೆ, ಹಾಸ್ಯ ಲೇಖನ, ವ್ಯಂಗ್ಯಚಿತ್ರ, ಚುಟುಕು ಸೇರಿದಂತೆ ಹಲವು ಸಾಹಿತ್ಯ ಪ್ರಾಕಾರಗಳಲ್ಲಿ ಕೃಷಿ ಮಾಡಿರುವ ಅರೆಯೂರು ಚಿ.ಸುರೇಶ್ ರವರು, ಅರೆಯೂರು ಚಿ.ಸುರೇಶ್, ಅರೆಯೂರು ಸುರೇಶ್, ಕಾವ್ಯ ಮಧುಗಿರಿ, ಮಾಣಿಕ್ಯ ಮಡಿಕೇರಿ, ಅರೆಯೂರು ಶ್ರೀ ವೈದ್ಯಸುತ, ಅಚಿಸು, ನಾದಪ್ರಿಯ, ಭಾರತಿಪ್ರಿಯ, ಅರೆಯೂರು ಕಾವ್ಯಸುತ, ಎಂಬ ಹಲವಾರು ಕಾವ್ಯನಾಮದಿಂದ ಹಲವಾರು ಲೇಖನಗಳನ್ನು, ಕಥೆ ಕವನಗಳನ್ನು ರಚಿಸಿದ್ದಾರೆ
ಅರೆಯೂರು ಚಿ.ಸುರೇಶ್ ರವರ ಲೇಖನಗಳು ನಾಡಿನ ಪತ್ರಿಕೆಗಳಲ್ಲಿ ಪ್ರಕಟಗೊಂಡಿವೆ ಪ್ರಮುಖವಾದವುಗಳೆಂದರೆ ಪ್ರಜಾವಾಣಿ, ಸುಧಾ ಮಯೂರ, ತುಷಾರ, ಉದಯವಾಣಿ, ಉದಯಕಾಲ,,ಮಲ್ಲಿಗೆ ಮಾಸಪತ್ರಿಕೆ, ನವರಾಗಸಂಗಮ, ಸಖಿ, ನಿಮ್ಮೆಲ್ಲರ ಮಾನಸ, ಮಾಣಿಕ್ಯ, ಓ ಮನಸೇ, ಹಾಯ್ ಬೆಂಗಳೂರು, ಸಂಜೆವಾಣಿ, ಗೃಹಶೋಭ, ಯುಗಪುರುಷ, ನಗೆಮುಗುಳು, ಪ್ರಜಾಪ್ರಗತಿ, ಪ್ರಜಾಮನ, ತುಮಕೂರು ಮಿತ್ರ, ಗೋವ ರಾಜ್ಯದಿಂದ ಪ್ರಕಟವಾಗುತಿದ್ದ ಗೋವ ದರ್ಪಣ, ಪತ್ರಿಕೆಗಳಲ್ಲಿ ಪ್ರಕಟಗೊಂಡಿವೆ
ಅಂತರ್ಜಾಲ ಪತ್ರಿಕೆಗಳಾದ ಪಂಜು, ಅವಧಿ, ಸಂಪದ, ವಿಶ್ವ ಕನ್ನಡಿಗ ನ್ಯೂಸ್, ಕನ್ನಡ ಆನ್ ಲೈನ್ ನ್ಯೂಸ್, ಕನ್ನಡ ನ್ಯೂಸ್ ನೌ ಸೇರಿದಂತೆ ಹಲವು ತಾಣಗಳಲ್ಲಿ ಲೇಖನ, ಕಥೆ ಕವಿತೆ ಪ್ರಕಟಗೊಂಡಿವೆ
ಅರೆಯೂರು ಚಿ.ಸುರೇಶ್ ಸಂಪಾದಕರಾಗಿ ಕಾರ್ಯ ನಿರ್ವಹಿಸುತ್ತಿರುವ ಪತ್ರಿಕೆಗಳು ಅರೆಯೂರು ಪತ್ರಿಕೆ, ಅರೆಯೂರು ನ್ಯೂಸ್, ಬಡವರ ಕೂಗು, ಸುದ್ದಿ ಸಮಾಚಾರ, ಕನ್ನಡ ಇ ನ್ಯೂಸ್, ತುಳು ನ್ಯೂಸ್ ಪ್ರಮುಖವಾದವುಗಳು
ವಾಲ್ಮೀಕಿ ಮಿತ್ರ ಪತ್ರಿಕೆಯಲ್ಲಿ ಕಾರ್ಯಕಾರಿ ಸಂಪಾದಕರಾಗಿ ಕಾರ್ಯ ನಿರ್ವಹಿಸಿದ್ದು, ವಿಶ್ವ ಕನ್ನಡಿಗ ನ್ಯೂಸ್ ನಲ್ಲಿ ಗುಬ್ಬಿ ತಾಲ್ಲೂಕು ವರದಿಗಾರರಾಗಿ, ಪ್ರಜಾಮನ ಪತ್ರಿಕೆಯಲ್ಲಿ ವಿಶೇಷ ವರದಿಗಾರರಾಗಿ ತುಮಕೂರು ವಾರ್ತೆ, ಅಮರ ಸಂದೇಶ ಪತ್ರಿಕೆಗಳಲ್ಲಿ ವರದಿಗಾರರಾಗಿ ಕೆಲಸ ಮಾಡಿದ್ದಾರೆ
ಅರೆಯೂರು ಚಿ.ಸುರೇಶ್ ರವರಿಗೆ ಕಾವ್ಯಶ್ರೀ, ಹೆಮ್ಮೆಯ ಕನ್ನಡಿಗ, ಕನ್ನಡ ಮಾಣಿಕ್ಯ ಸೇರಿದಂತೆ ಹಲವಾರು ಪ್ರಶಸ್ತಿಗಳು ಲಭಿಸಿವೆ
ತುಮಕೂರು ಜಿಲ್ಲೆಯಲ್ಲಿ ಹುಟ್ಟಿ ಬೆಳೆದಿದ್ದ ಅರೆಯೂರು ಚಿ.ಸುರೇಶ್ ರವರು ದೂರದ ಕರಾವಳಿ ಭಾಗದ ತುಳು ಭಾಷೆಯ ತುಳು ನ್ಯೂಸ್ ಆನ್ಲೈನ್ ಪತ್ರಿಕೆ ಮಾಡಿ ತುಳು ನಾಡಿನ ತುಳು ಭಾಷಿಕರಿಗೆ ತುಳು ಭಾಷೆಯಲ್ಲಿ ಸುದ್ದಿ ನೀಡುತ್ತಿರುವ ಕಾರ್ಯ ಶ್ಲಾಘನೀಯ
ಅರೆಯೂರು ಚಿ.ಸುರೇಶ್ ರವರ ಪ್ರಕಟಿತ ಕೃತಿಗಳು
ಶಿರ್ಷಿಕೆ | ಪ್ರಕಾರ | ಪ್ರಕಟಿತ ವರ್ಷ
ಕಾವ್ಯಮಂಜರಿ (ಕವನ ಸಂಕಲನ) 2012
ಮಾಣಿಕ್ಯ (ಕಥಾಸಂಕಲನ) 2014
ಅನಾಮಿಕ (ಕಾದಂಬರಿ) 2016
ಕನಸು (ಕವನ ಸಂಕಲನ) 2014
ಪ್ರೇಮಾಯಣ (ಕಥಾಸಂಕಲನ) 2017
ಮಂಥನ (ಲೇಖನ ಸಂಗ್ರಹ) 2017
ಆರೋಗ್ಯವಾಗಿರೋಣ... (ಲೇಖನ ಸಂಗ್ರಹ) 2019
ಶ್ರೀ ವೈದ್ಯನಾಥೇಶ್ವರ ಸ್ವಾಮಿ ಚರಿತ್ರೆ (ಲೇಖನ ಸಂಗ್ರಹ) 2013
ನಮ್ಮೂರ ಇತಿಹಾಸ (ಲೇಖನ ಸಂಗ್ರಹ) 2013
(ಎಲ್ಲಾ ಕೃತಿಗಳ ಪ್ರಕಾಶಕರು: ಶಮಿತಾ ಪಬ್ಲಿಕೇಶನ್, ಪಡುಬಿದ್ರಿ, ಉಡುಪಿ)
![]() |
ಶುಕ್ರವಾರ, ಜುಲೈ 12, 2013
ಭಾನುವಾರ, ಜೂನ್ 30, 2013
- ಹಿಟ್ಲರ್ಗಾಗಿ ಸತ್ತು ಬದುಕಿದ್ದ ಮಾರ್ಗೋಟ್!
- ಹಿಟ್ಲರ್ಗಾಗಿ ಪ್ರತಿದಿನವೂ ಸತ್ತು ಬದುಕಿದ್ದ ಮಾರ್ಗೋಟ್..!
ಜರ್ಮನಿಯನ್ನು ಮುಷ್ಟಿಯಲ್ಲಿ ಇಟ್ಟುಕೊಂಡಿದ್ದ ಸರ್ವಾಧಿಕಾರಿ ಅಡಾಲ್ಫ್ ಹಿಟ್ಲರ್ ಭಾರೀ ಪುಕ್ಕಲ. ಯಾರಾದರೂ ತನಗೆ ಆಹಾರದಲ್ಲಿ ವಿಷ ಸೇರಿಸಿ ಸಾಯಿಸಬಹುದೆಂಬುದು ಭೀತಿ ಆತನನ್ನು ಸದಾ ಕಾಡುತ್ತಿತ್ತು. ಹೀಗಾಗಿ ತನಗೆ ಸಿದ್ಧಪಡಿಸಿದ್ದ ಆಹಾರ ಪರೀಕ್ಷಿಸಲೆಂದೇ 15 ಮಹಿಳೆಯರ ನೇಮಿಸಿಕೊಂಡಿದ್ದ. ಅವರೆಲ್ಲಾ ಆಹಾರ ತಿಂದ ಮೇಲೂ ಬದುಕಿದ್ದಾರೆ ಎಂಬುದನ್ನು ಖಚಿತಡಿಸಿಕೊಂಡ ಬಳಿಕವಷ್ಟೇ ಆತ ತಾನು ಆಹಾರ ತಿನ್ನುತ್ತಿದ್ದ. ಹೀಗೆ ಆಕಸ್ಮಿಕವಾಗಿ ಆತನ ಕೈಗೆ ಸಿಕ್ಕು, ಆಹಾರ ಪರೀಕ್ಷೆಯ ಕೆಲಸಕ್ಕೆ ನಿಯೋಜಿಸಲ್ಪಟ್ಟಿದ್ದು ಮಾರ್ಗೋಟ್ ವೋಕ್ ಎಂಬ ಮಹಿಳೆ.
ಹಿಟ್ಲರ್ ಸಸ್ಯಾಹಾರಿ..!
ಎರಡನೇ ಮಹಾಯುದ್ಧದ ವೇಳೆ ಪತಿ ಜರ್ಮನ್ ಸೇನೆಯಲ್ಲಿ ಸೇವೆಗೆ ತೆರಳಿದ ವೇಳೆ, ಈಕೆ ಬಾಂಬ್ ದಾಳಿಯಿಂದ ತಪ್ಪಿಸಿಕೊಳ್ಳಲು ಹೋಗಿ ಹಿಟ್ಲರ್ನ ಕೈಗೆ ಸಿಕ್ಕಿಬಿದ್ದಿದ್ದಳು. ಆತ ಮಾರ್ಗೋಟ್ಳನ್ನು ಆಹಾರ ಪರೀಕ್ಷೆ ಕೆಲಸಕ್ಕೆ ಸೇರಿಸಿಕೊಂಡಿದ್ದ. ಶುದ್ಧ ಸಸ್ಯಾಹಾರಿಯಾಗಿದ್ದ ಹಿಟ್ಲರ್ನ ಆಹಾರವನ್ನು ತಿನ್ನುವುದೇ ಮಾಗೋìಟ್ ಸೇರಿದಂತೆ 15 ಮಹಿಳೆಯರ ಏಕೈಕ ಕೆಲಸವಾಗಿತ್ತು. ಪ್ರತಿ ಬಾರಿ ಆಹಾರ ಬಾಯಿಗಿಟ್ಟಾಗಲೂ ಎಲ್ಲರೂ ಜೀವಭಯಕ್ಕೆ ಒಳಗಾಗಿರುತ್ತಿದ್ದರು. ರುಚಿಯಾದ ಆಹಾರ ಬಾಯಲ್ಲಿದ್ದರೂ, ಅದರಲ್ಲಿ ವಿಷ ಇರಬಹುದೇನೂ ಎಂಬ ಆತಂಕ ಅವರನ್ನೆಲ್ಲಾ ಕಾಡುತ್ತಿತ್ತು.
ಇಷ್ಟೆಲ್ಲಾ ಭದ್ರತೆ ಇದ್ದರೂ, 1944ರಲ್ಲಿ ಹಿಟ್ಲರ್ನ ಆಪ್ತ ಬಳಗದಲ್ಲಿದ್ದ ವ್ಯಕ್ತಿಯೋರ್ವನೇ ಬಾಂಬ್ ದಾಳಿ ನಡೆಸಿ ಹಿಟ್ಲರ್ ಹತ್ಯೆಗೆ ಯತ್ನಿಸಿದ್ದ. ಅದೃಷ್ಟವಶಾತ್ ಹಿಟ್ಲರ್ ಬದುಕುಳಿದ. ಈ ಸ್ಫೋಟದ ಘಟನೆಯ ಸಮಯದಲ್ಲೇ ಆಪ್ತರ ಸಲಹೆ ಮೇರೆಗೆ ಮಾರ್ಗೋಟ್ ಹಿಟ್ಲರ್ನ ಆವಾಸಸ್ಥಾನದಿಂದ ಪರಾರಿಯಾಗಿ ಬರ್ಲಿನ್ ಸೇರಿಕೊಂಡಿದ್ದಳು. ಆದರೆ ಉಳಿದ 14 ಜನ ಸೇವಕಿಯರು ಹಿಟ್ಲರ್ ಬಳಿಯೇ ಉಳಿದುಕೊಂಡಿದ್ದರು.
ಮುಂದೆ ಕೆಲವೇ ದಿನಗಳಲ್ಲಿ ಸೋವಿಯತ್ ಒಕ್ಕೂಟದ ಪಡೆಗಳು ಜರ್ಮನ್ ಮೇಲೆ ದಾಳಿ ನಡೆಸಿ ದೇಶವನ್ನು ಕೈವಶ ಮಾಡಿಕೊಂಡವು. ಸೋವಿಯತ್ ಪಡೆಗಳು ಹಿಟ್ಲರ್ನ ಎಲ್ಲಾ 14 ಆಹಾರ ಪರೀಕ್ಷಕಿಯರನ್ನು ಗುಂಡಿಟ್ಟು ಹತ್ಯೆ ಮಾಡಿದವು. ಇತ್ತ ಹಿಟ್ಲರ್ನಿಂದ ಪಾರಾಗಿದ್ದ ಮಾರ್ಗೋಟ್ ರಷ್ಯಾ ಸೈನಿಕರ ಕೈಯಲ್ಲಿ ಸತತ 14 ದಿನ ಅತ್ಯಾಚಾರಕ್ಕೆ ತುತ್ತಾದಳು.
ಮುಂದೆ ಯುದ್ಧ ಮುಗಿದ ಮೇಲೆ ಆಕೆ ಹೊಸ ಜೀವನ ಕಂಡುಕೊಂಡಿದ್ದಳು. ಆದರೆ ತಾನು ಹಿಟ್ಲರ್ನ ಆಹಾರ ಪರೀಕ್ಷಕಿಯಾಗಿ ಸೇವೆ ಸಲ್ಲಿಸಿದ್ದ ವಿಷಯವನ್ನೂ ಮಾರ್ಗೋಟ್ ಯಾರಿಗೂ ತಿಳಿಸಿರಲಿಲ್ಲ. ತಿಳಿಸಿದರೆ ಯಾರಾದರೂ ಹತ್ಯೆ ಮಾಡುವ ಭಯ ಆಕೆಯನ್ನು ಕಾಡುತ್ತಿತ್ತು. ಇದೀಗ ಜೀವನದ ಕಡೆಯ ಕ್ಷಣಗಳನ್ನು ಎಣಿಸುತ್ತಿರುವ ಮಾರ್ಗೋಟ್, ತನ್ನ ಅನುಭವಗಳನ್ನೆಲ್ಲಾ ಬಯಲು ಮಾಡಿದ್ದಾಳೆ. ಅದರಲ್ಲಿ ಆಕೆ ತನ್ನ ಈ ಕಥೆ ಹೇಳಿಕೊಂಡಿದ್ದಾಳೆ.
ಸೋಮವಾರ, ಮೇ 13, 2013
ಗುಬ್ಬಚ್ಚಿ ಕಣ್ಣಿಗೇಕೋ ಕಾಣದಮ್ಮ.....
ಯಾಂತ್ರಿಕ ಬದುಕಿನ ಜಂಜಾಟದಲ್ಲಿ ಮಾನವೀಯ ಸಂಬಂಧಗಳ ಕೊಂಡಿ ಕಳಚುತ್ತಿರುವ ಇಂದಿನ ದಿನಗಳಲ್ಲಿ ಪಕ್ಷಿಗಳೆಡೆಗಿನ ಪ್ರೀತಿ- ವಾತ್ಸಲ್ಯವನ್ನು ಕಾಪಾಡಡಲು ಪ್ರಯತ್ನಿಸುತ್ತಿರುವ ಇಂತಹ ಕೆಲವು ಪರಿಸರ ಪ್ರೇಮಿಗಳ ಪ್ರಯತ್ನಗಳು ಎಲ್ಲರಿಗೂ ಮಾದರಿಯಾಗಲಿ. ಪರಿಸರ ಸಮತೋಲನ ಕಾಪಾಡಲು ಪ್ರಯತ್ನಿಸಿ, ಕಳೆದುಕೊಳ್ಳುತ್ತಿರುವ ಬಾಂಧವ್ಯ, ಪರಿಸರದ ಕೊಂಡಿಯನ್ನು ಮತ್ತೆ ಕೂಡಿಸಲು ಪ್ರಯತ್ನಿಸೋಣ. ಪಕ್ಷಿಗಳು ಮತ್ತೆ ನಮ್ಮ ನಮ್ಮ ಮನೆಯಂಗಳದಲಿ ಚಿಲಿಪಿಲಿಗುಟ್ಟಲಿ. ಅವುಗಳ ಅಳಿವು-ಉಳಿವಿನೊಂದಿಗೆ ನಮ್ಮ ಬದುಕೂ ಅಂಟಿದೆ- ಭಾವನಾತ್ಮಕ ನಂಟಿದೆ. ಗುಬ್ಬಿ ಗುಬ್ಬಿ ಚಿಂವ್ ಚಿಂವ್ ಎಂದು ಕರೆಯುವ ಯಾರನ್ನು ?ಆಚೆ ಈಚೆ ಹೊರಳಿಸಿ ಕಣ್ಣು ನೋಡುವೆ ಏನನ್ನು? ಮೇಲೆ ಕೆಳಗೆ ಕೊಂಕಿಸಿ ಕೊರಳನು ಹುಡುಕುವೆ ಏನನ್ನು? ಎಂದು ಮತ್ತೆ ಹಾಡೋಣ. ನಮ್ಮ ಆತ್ಮೀಯ ಜನ-ಪ್ರಿಯ ಗುಬ್ಬಕ್ಕನನ್ನು ಮತ್ತೆ ನಮ್ಮ ಮನ-ಮನೆಯಂಗಳಕ್ಕೆ ತರಲು ಪ್ರಯತ್ನಿಸೋಣ.
ಶನಿವಾರ, ಏಪ್ರಿಲ್ 27, 2013
“ಅವಳ ಬಾಳ ಪುಟಗಳಿಂದ”
ಗುರುವಾರ, ಡಿಸೆಂಬರ್ 1, 2011
ಬುಧವಾರ, ನವೆಂಬರ್ 30, 2011
ಗುರುವಾರ, ನವೆಂಬರ್ 3, 2011
ಯಾಕೆ ಕಾಡುತಿದೆ ಸುಮ್ಮನೆ ನನ್ನನು ಈ …ಹಾಡು?
-ಅರೆಯೂರು ಚಿ.ಸುರೇಶ್









